BREAKING NEWS

ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ : ಅಂಬೇಡ್ಕರ್‌ ಹೇಳಿದ ಮಾತನ್ನು ಪುನರುಚ್ಛರಿಸಿದ ಖರ್ಗೆ

ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್‌ ಆಗಾಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್‌ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ‘ ಎಂದು ಅಂಬೇಡ್ಕರ್‌ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.

https://twitter.com/kharge/status/1646709273311981571?t=MC3foyaXTy-UU1ie4-6xUg&s=08

lokesh

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago