ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಾಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ‘ ಎಂದು ಅಂಬೇಡ್ಕರ್ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.
https://twitter.com/kharge/status/1646709273311981571?t=MC3foyaXTy-UU1ie4-6xUg&s=08
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…