BREAKING NEWS

ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ : ಅಂಬೇಡ್ಕರ್‌ ಹೇಳಿದ ಮಾತನ್ನು ಪುನರುಚ್ಛರಿಸಿದ ಖರ್ಗೆ

ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್‌ ಆಗಾಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ ಕುರಿತು ಟ್ವೀಟರ್‌ನಲ್ಲಿ ಖರ್ಗೆ ವಿಡಿಯೊ ಸಂದೇಶ ನೀಡಿದ್ದಾರೆ. ಈ ವೇಳೆ ಆಡಳಿತ ಪಕ್ಷದ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಸಂಸತ್ತನ್ನು ಚರ್ಚೆಗಿಂತ ಹೋರಾಟದ ಅಖಾಡವಾಗಿ ಆಡಳಿತ ಪಕ್ಷ ಬದಲಾಯಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

‘ಧರ್ಮದ ಪ್ರಕಾರ ಭಕ್ತಿ ಮೋಕ್ಷದ ದಾರಿಯಾಗಿದೆ. ಆದರೆ, ರಾಜಕೀಯದಲ್ಲಿ ಭಕ್ತಿ ಅಥವಾ ನಾಯಕನ ಆರಾಧನೆ ದೇಶದ ಅವನತಿಗೆ ದಾರಿಯಾಗಲಿದೆ. ಅಂತಿಮವಾಗಿ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ‘ ಎಂದು ಅಂಬೇಡ್ಕರ್‌ ಹೇಳಿದ ಮಾತನ್ನು ಖರ್ಗೆ ಪುನರುಚ್ಛರಿಸಿದ್ದಾರೆ.

https://twitter.com/kharge/status/1646709273311981571?t=MC3foyaXTy-UU1ie4-6xUg&s=08

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago