BREAKING NEWS

ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಹಾಕಿ ಸಂಚಲನ ಮೂಡಿಸಿದ ಹಿಡನ್ಸ್‌ ಬರ್ಗ್

ನವದೆಹಲಿ – ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ.
ತನ್ನ ಟ್ವೀಟರ್ ಖಾತೆಯಲ್ಲಿ ಹಿಡನ್ಸ್ ಬರ್ಗ್‍ನ ಹೊಸ ಪೋಸ್ಟ್‌ ಕಾರ್ಪೋರೇಟ್ ವಲಯದಲ್ಲಿ ಬೇಸಿಗೆಯಲ್ಲೂ ಚಳಿ ಹುಟ್ಟಿಸಿದೆ. ಕಳೆದ ಜನವರಿಯಲ್ಲಿ ಭಾರತೀಯ ಸಂಸ್ಥೆ ಅದಾನಿ ಗ್ರೂಪ್ ವಿರುದ್ಧ ದಾಖಲೆ ಸಹಿತ ವರದಿ ಪ್ರಕಟಿಸಿತ್ತು. ಅದಕ್ಕೆ ಸ್ಪಷ್ಟ ಉತ್ತರ ನೀಡಲಾಗದೆ ಎರಡು ತಿಂಗಳು ಕಳೆದರೂ ಅದಾನಿ ಗ್ರೂಪ್ ಪರದಾಡುತ್ತಿದೆ. ಅದರ ಮಾರುಕಟ್ಟೆ ಮೌಲ್ಯ 10 ಲಕ್ಷ ಕೋಟಿ ರೂಪಾಯಿಗೂ ಅಧಿಕವಾಗಿ ಕುಸಿದು ಹೋಗಿದೆ. ಅದರಲ್ಲಿ ಹೂಡಿಕೆ ಮಾಡಿದ್ದ ಷೇರುದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಸರ್ಕಾರಿ ಸ್ವಾಮ್ಯದ ಎಲ್‍ಐಸಿ ಆತಂಕದಲ್ಲಿದೆ, ಸಾಲ ನೀಡಿದ್ದ ಎಸ್‍ಬಿಐ ಬಿಸಿ ಬಾಣಲೆಯ ಮೇಲೆ ಕುಳಿತಂತೆ ಚಡಪಡಿಸುತ್ತಿದೆ.
ವಿರೋಧ ಪಕ್ಷಗಳು ಅದಾನಿ ಗೂಪ್‍ನ ಅಧ್ಯಕ್ಷ ಗೌತಮ್ ಅದಾನಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಂಟನ್ನು ಪ್ರಶ್ನಿಸುತ್ತಿವೆ. ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅಪರಾಧಗಳನ್ನು ಸಂಸತ್‍ನ ಜಂಟಿ ಸದನ ಸಮಿತಿಯ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದಿವೆ. ಈ ಕಾರಣಕ್ಕಾಗಿ ಬಜೆಟ್ ಅವೇಶನದಲ್ಲಿ ಕಲಾಪ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಪ್ರಸ್ತುತ ನಡೆಯುತ್ತಿರುವ ಮುಂದುವರೆದ ಬಜೆಟ್ ಅವೇಶದಲ್ಲೂ ಎಂಟು ದಿನ ಕಳೆದರೂ ಯಾವುದೇ ಚರ್ಚೆ ಇಲ್ಲದೆ ಗದ್ದಲ ಕೋಲಾಹಲದಿಂದಾಗಿ ಕಲಾಪದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲಾಗದೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಜನರ ಗಮನ ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿವೆ.
ವಿಶ್ವದಲ್ಲಿ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನ, ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಗೌತಮ್ ಅದಾನಿ ಅಷ್ಟೈಶ್ವರ್ಯಗಳು ಏಕಾಏಕಿ ಕುಸಿದು ಹೋಗಿವೆ. ಶ್ರೀಮಂತರ ಪಟ್ಟಿಯಲ್ಲಿ ನೂರಕ್ಕಿಂತಲ್ಲೂ ಕೆಳಗಿನ ಸ್ಥಾನಕ್ಕೆ ದೂಡಲ್ಪಟ್ಟಿದ್ದಾರೆ.
ಈ ನಡುವೆ ಹಿಡನ್ಸ್ ಬರ್ಗ್ ಅಮೆರಿಕಾ ಸಂಸ್ಥೆಯಾಗಿದ್ದು, ಭಾರತೀಯ ಉದ್ಯಮಿಗಳ ವಿರುದ್ಧ ಸಂಚು ನಡೆಸುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿವೆ. ಈಗ ಮತ್ತೊಂದು ವರದಿಯ ಬೆದರಿಕೆ ಹಾಕಿರುವ ಹಿಡನ್ಸ್ ಬರ್ಗ್ ಸಂಚಲನವನ್ನೇ ಸೃಷ್ಟಿಸಿದೆ. ಷೇರು ಮಾರುಕಟ್ಟೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

lokesh

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago