BREAKING NEWS

ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಹಾಕಿ ಸಂಚಲನ ಮೂಡಿಸಿದ ಹಿಡನ್ಸ್‌ ಬರ್ಗ್

ನವದೆಹಲಿ – ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ.
ತನ್ನ ಟ್ವೀಟರ್ ಖಾತೆಯಲ್ಲಿ ಹಿಡನ್ಸ್ ಬರ್ಗ್‍ನ ಹೊಸ ಪೋಸ್ಟ್‌ ಕಾರ್ಪೋರೇಟ್ ವಲಯದಲ್ಲಿ ಬೇಸಿಗೆಯಲ್ಲೂ ಚಳಿ ಹುಟ್ಟಿಸಿದೆ. ಕಳೆದ ಜನವರಿಯಲ್ಲಿ ಭಾರತೀಯ ಸಂಸ್ಥೆ ಅದಾನಿ ಗ್ರೂಪ್ ವಿರುದ್ಧ ದಾಖಲೆ ಸಹಿತ ವರದಿ ಪ್ರಕಟಿಸಿತ್ತು. ಅದಕ್ಕೆ ಸ್ಪಷ್ಟ ಉತ್ತರ ನೀಡಲಾಗದೆ ಎರಡು ತಿಂಗಳು ಕಳೆದರೂ ಅದಾನಿ ಗ್ರೂಪ್ ಪರದಾಡುತ್ತಿದೆ. ಅದರ ಮಾರುಕಟ್ಟೆ ಮೌಲ್ಯ 10 ಲಕ್ಷ ಕೋಟಿ ರೂಪಾಯಿಗೂ ಅಧಿಕವಾಗಿ ಕುಸಿದು ಹೋಗಿದೆ. ಅದರಲ್ಲಿ ಹೂಡಿಕೆ ಮಾಡಿದ್ದ ಷೇರುದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಸರ್ಕಾರಿ ಸ್ವಾಮ್ಯದ ಎಲ್‍ಐಸಿ ಆತಂಕದಲ್ಲಿದೆ, ಸಾಲ ನೀಡಿದ್ದ ಎಸ್‍ಬಿಐ ಬಿಸಿ ಬಾಣಲೆಯ ಮೇಲೆ ಕುಳಿತಂತೆ ಚಡಪಡಿಸುತ್ತಿದೆ.
ವಿರೋಧ ಪಕ್ಷಗಳು ಅದಾನಿ ಗೂಪ್‍ನ ಅಧ್ಯಕ್ಷ ಗೌತಮ್ ಅದಾನಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಂಟನ್ನು ಪ್ರಶ್ನಿಸುತ್ತಿವೆ. ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅಪರಾಧಗಳನ್ನು ಸಂಸತ್‍ನ ಜಂಟಿ ಸದನ ಸಮಿತಿಯ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದಿವೆ. ಈ ಕಾರಣಕ್ಕಾಗಿ ಬಜೆಟ್ ಅವೇಶನದಲ್ಲಿ ಕಲಾಪ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಪ್ರಸ್ತುತ ನಡೆಯುತ್ತಿರುವ ಮುಂದುವರೆದ ಬಜೆಟ್ ಅವೇಶದಲ್ಲೂ ಎಂಟು ದಿನ ಕಳೆದರೂ ಯಾವುದೇ ಚರ್ಚೆ ಇಲ್ಲದೆ ಗದ್ದಲ ಕೋಲಾಹಲದಿಂದಾಗಿ ಕಲಾಪದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲಾಗದೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಜನರ ಗಮನ ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿವೆ.
ವಿಶ್ವದಲ್ಲಿ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನ, ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಗೌತಮ್ ಅದಾನಿ ಅಷ್ಟೈಶ್ವರ್ಯಗಳು ಏಕಾಏಕಿ ಕುಸಿದು ಹೋಗಿವೆ. ಶ್ರೀಮಂತರ ಪಟ್ಟಿಯಲ್ಲಿ ನೂರಕ್ಕಿಂತಲ್ಲೂ ಕೆಳಗಿನ ಸ್ಥಾನಕ್ಕೆ ದೂಡಲ್ಪಟ್ಟಿದ್ದಾರೆ.
ಈ ನಡುವೆ ಹಿಡನ್ಸ್ ಬರ್ಗ್ ಅಮೆರಿಕಾ ಸಂಸ್ಥೆಯಾಗಿದ್ದು, ಭಾರತೀಯ ಉದ್ಯಮಿಗಳ ವಿರುದ್ಧ ಸಂಚು ನಡೆಸುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿವೆ. ಈಗ ಮತ್ತೊಂದು ವರದಿಯ ಬೆದರಿಕೆ ಹಾಕಿರುವ ಹಿಡನ್ಸ್ ಬರ್ಗ್ ಸಂಚಲನವನ್ನೇ ಸೃಷ್ಟಿಸಿದೆ. ಷೇರು ಮಾರುಕಟ್ಟೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

lokesh

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

1 hour ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

2 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

2 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

3 hours ago