BREAKING NEWS

ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಹಾಕಿ ಸಂಚಲನ ಮೂಡಿಸಿದ ಹಿಡನ್ಸ್‌ ಬರ್ಗ್

ನವದೆಹಲಿ – ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ.
ತನ್ನ ಟ್ವೀಟರ್ ಖಾತೆಯಲ್ಲಿ ಹಿಡನ್ಸ್ ಬರ್ಗ್‍ನ ಹೊಸ ಪೋಸ್ಟ್‌ ಕಾರ್ಪೋರೇಟ್ ವಲಯದಲ್ಲಿ ಬೇಸಿಗೆಯಲ್ಲೂ ಚಳಿ ಹುಟ್ಟಿಸಿದೆ. ಕಳೆದ ಜನವರಿಯಲ್ಲಿ ಭಾರತೀಯ ಸಂಸ್ಥೆ ಅದಾನಿ ಗ್ರೂಪ್ ವಿರುದ್ಧ ದಾಖಲೆ ಸಹಿತ ವರದಿ ಪ್ರಕಟಿಸಿತ್ತು. ಅದಕ್ಕೆ ಸ್ಪಷ್ಟ ಉತ್ತರ ನೀಡಲಾಗದೆ ಎರಡು ತಿಂಗಳು ಕಳೆದರೂ ಅದಾನಿ ಗ್ರೂಪ್ ಪರದಾಡುತ್ತಿದೆ. ಅದರ ಮಾರುಕಟ್ಟೆ ಮೌಲ್ಯ 10 ಲಕ್ಷ ಕೋಟಿ ರೂಪಾಯಿಗೂ ಅಧಿಕವಾಗಿ ಕುಸಿದು ಹೋಗಿದೆ. ಅದರಲ್ಲಿ ಹೂಡಿಕೆ ಮಾಡಿದ್ದ ಷೇರುದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಸರ್ಕಾರಿ ಸ್ವಾಮ್ಯದ ಎಲ್‍ಐಸಿ ಆತಂಕದಲ್ಲಿದೆ, ಸಾಲ ನೀಡಿದ್ದ ಎಸ್‍ಬಿಐ ಬಿಸಿ ಬಾಣಲೆಯ ಮೇಲೆ ಕುಳಿತಂತೆ ಚಡಪಡಿಸುತ್ತಿದೆ.
ವಿರೋಧ ಪಕ್ಷಗಳು ಅದಾನಿ ಗೂಪ್‍ನ ಅಧ್ಯಕ್ಷ ಗೌತಮ್ ಅದಾನಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಂಟನ್ನು ಪ್ರಶ್ನಿಸುತ್ತಿವೆ. ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅಪರಾಧಗಳನ್ನು ಸಂಸತ್‍ನ ಜಂಟಿ ಸದನ ಸಮಿತಿಯ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದಿವೆ. ಈ ಕಾರಣಕ್ಕಾಗಿ ಬಜೆಟ್ ಅವೇಶನದಲ್ಲಿ ಕಲಾಪ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ಪ್ರಸ್ತುತ ನಡೆಯುತ್ತಿರುವ ಮುಂದುವರೆದ ಬಜೆಟ್ ಅವೇಶದಲ್ಲೂ ಎಂಟು ದಿನ ಕಳೆದರೂ ಯಾವುದೇ ಚರ್ಚೆ ಇಲ್ಲದೆ ಗದ್ದಲ ಕೋಲಾಹಲದಿಂದಾಗಿ ಕಲಾಪದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ. ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲಾಗದೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಜನರ ಗಮನ ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿವೆ.
ವಿಶ್ವದಲ್ಲಿ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನ, ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಗೌತಮ್ ಅದಾನಿ ಅಷ್ಟೈಶ್ವರ್ಯಗಳು ಏಕಾಏಕಿ ಕುಸಿದು ಹೋಗಿವೆ. ಶ್ರೀಮಂತರ ಪಟ್ಟಿಯಲ್ಲಿ ನೂರಕ್ಕಿಂತಲ್ಲೂ ಕೆಳಗಿನ ಸ್ಥಾನಕ್ಕೆ ದೂಡಲ್ಪಟ್ಟಿದ್ದಾರೆ.
ಈ ನಡುವೆ ಹಿಡನ್ಸ್ ಬರ್ಗ್ ಅಮೆರಿಕಾ ಸಂಸ್ಥೆಯಾಗಿದ್ದು, ಭಾರತೀಯ ಉದ್ಯಮಿಗಳ ವಿರುದ್ಧ ಸಂಚು ನಡೆಸುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿವೆ. ಈಗ ಮತ್ತೊಂದು ವರದಿಯ ಬೆದರಿಕೆ ಹಾಕಿರುವ ಹಿಡನ್ಸ್ ಬರ್ಗ್ ಸಂಚಲನವನ್ನೇ ಸೃಷ್ಟಿಸಿದೆ. ಷೇರು ಮಾರುಕಟ್ಟೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

lokesh

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

9 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

10 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

18 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

25 mins ago