BREAKING NEWS

ಸಿಎಂ ಆಯ್ಕೆ ಹೈಕಮಾಂಡ್ ಮಾಡಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : “ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು” ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸಂಚಲನ ಮೂಡಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳ ಕುರಿತಾದ ಪ್ರಶ್ನೆಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ರೀತಿಯಾಗಿ ಹೇಳಿದ್ದಾರೆ.
ಇನ್ನು ಕೆಲ ಮಾಧ್ಯಮಗಳಲ್ಲಿ ಡಿಕೆಶಿ ಸಿಎಂ ಆಗಲು ಹೈಕಮಾಂಡ್ ಒಪ್ಪಲ್ಲ ಎಂಬ ರೀತಿ ಹೇಳಿಕೆಗಳು ತಪ್ಪಾಗಿ ಹೋಗುತ್ತಿವೆ. ಇದು ಸತ್ಯಕ್ಕೆ ದೂರವಾಗಿದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ಈ ಹೇಳಿಕೆ ಒಗ್ಗಟ್ಟಿನ ಮಂತ್ರದೊಂದಿಗೆ ಚುನಾವಣೆಗೆ ಅಣಿಯಾಗಿರುವ ಕಾಂಗ್ರೆಸ್‌ನಲ್ಲಿ ಗೊಂದಲದ ಜತೆಗೆ, ಕೋಲಾಹಲ ಸೃಷ್ಟಿಗೆ ಕಾರಣವಾಗಿತ್ತು.
ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ದಿಲ್ಲಿಯಲ್ಲಿ ಮಂಗಳವಾರ ಕೇಂದ್ರ ಚುನಾವಣಾ ಸಮಿತಿ ನಡೆಯುತ್ತಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಪಕ್ಷದೊಳಗೆ ತಳಮಳ ಸೃಷ್ಟಿಸಿದೆ. ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ಭಾರತ ಐಕ್ಯತಾ ಯಾತ್ರೆ ಬಳಿಕ ತಮ್ಮ ನಾಯಕನ ಒತ್ತಾಸೆಯಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ದಶಕದ ನಡುವಿನ ಶತ್ರುತ್ವ ಮರೆತು ಒಟ್ಟಿಗೆ ಹೆಜ್ಜೆ ಹಾಕಿದ್ದರು.

lokesh

Recent Posts

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

9 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

14 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

45 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

4 hours ago