ಬೆಂಗಳೂರು : “ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು” ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸಂಚಲನ ಮೂಡಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳ ಕುರಿತಾದ ಪ್ರಶ್ನೆಗೆ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ರೀತಿಯಾಗಿ ಹೇಳಿದ್ದಾರೆ.
ಇನ್ನು ಕೆಲ ಮಾಧ್ಯಮಗಳಲ್ಲಿ ಡಿಕೆಶಿ ಸಿಎಂ ಆಗಲು ಹೈಕಮಾಂಡ್ ಒಪ್ಪಲ್ಲ ಎಂಬ ರೀತಿ ಹೇಳಿಕೆಗಳು ತಪ್ಪಾಗಿ ಹೋಗುತ್ತಿವೆ. ಇದು ಸತ್ಯಕ್ಕೆ ದೂರವಾಗಿದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ಈ ಹೇಳಿಕೆ ಒಗ್ಗಟ್ಟಿನ ಮಂತ್ರದೊಂದಿಗೆ ಚುನಾವಣೆಗೆ ಅಣಿಯಾಗಿರುವ ಕಾಂಗ್ರೆಸ್ನಲ್ಲಿ ಗೊಂದಲದ ಜತೆಗೆ, ಕೋಲಾಹಲ ಸೃಷ್ಟಿಗೆ ಕಾರಣವಾಗಿತ್ತು.
ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ದಿಲ್ಲಿಯಲ್ಲಿ ಮಂಗಳವಾರ ಕೇಂದ್ರ ಚುನಾವಣಾ ಸಮಿತಿ ನಡೆಯುತ್ತಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಪಕ್ಷದೊಳಗೆ ತಳಮಳ ಸೃಷ್ಟಿಸಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ಯಾತ್ರೆ ಬಳಿಕ ತಮ್ಮ ನಾಯಕನ ಒತ್ತಾಸೆಯಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದಶಕದ ನಡುವಿನ ಶತ್ರುತ್ವ ಮರೆತು ಒಟ್ಟಿಗೆ ಹೆಜ್ಜೆ ಹಾಕಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…