ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿಸಿ, ಸಂಚಾರ ಪೊಲೀಸರ ವಿರುದ್ಧದ ಸ್ಟಿಂಗ್ ಆಪರೇಷನ್ ಎತ್ತಿಹಿಡಿದಿದೆ. ಜೊತೆಗೆ ಎನ್ ಬ್ರಾಡ್ ಕಾಸ್ಟಿಂಗ್ ಸ್ಟಾಂಡರ್ಡ್ ಅಥಾರಿಟಿ(ಬಿಎಸ್ಎ), ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯ ಕುಟುಕು ಕಾರ್ಯಾಚರಣೆಗಳು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶಿಸಿತು.
ಅಧೀನ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಬೆಂಗಳೂರಿನ ಈಶಾನ್ಯ ವಲಯದ ಸಂಚಾರ ವಿಭಾಗದ ಎಸಿಪಿ ಎಂ.ಎಸ್.ಅಶೋಕ್ ಮತ್ತಿತರ ಹಲವು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ಕುಟುಕು ಕಾರ್ಯಚರಣೆ ಮಾಡುವಾಗ ನಿಯಮದಂತೆ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಪಾದಕರ ತಂಡದ ಮುಖ್ಯಸ್ಥರ ಪೂರ್ವಾನುಮತಿ ಪಡೆದಿರಬೇಕು. ಸಾರ್ವಜನಿಕ ಹಿತಾಸಕ್ತಿ, ತಪ್ಪು ಬಯಲುಗೊಳಿಸುವ ಉದ್ದೇಶ ಹೊಂದಿರಬೇಕು. ಆದರೆ, ಅದರಿಂದ ವ್ಯಕ್ತಿಯ ಖಾಸಗಿ ಜೀವನಕ್ಕೆ ತೊಂದರೆಯಾಗುವಂತಿರಬಾರದು. ಲಂಚ ಸ್ವೀಕರಿಸುವಂತೆ ಆಮಿಷ ಒಡ್ಡುವಂತಿರಬಾರದು. ಆದರೆ, ಬೆಂಗಳೂರು ಪ್ರವೇಶಿಸಲು ಗ್ರಾನೈಟ್ ಲಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರ ಮೇಲಿನ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸಿರುವ ದೃಶ್ಯಗಳಿವೆ. ಹೀಗಾಗಿ, ಸಂಚಾರ ಪೊಲೀಸರ ವಿರುದ್ಧದ ಕುಟುಕು ಕಾರ್ಯಾಚರಣೆ ಎತ್ತಿಹಿಡಿಯಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳೂ ಸಹ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ವಿಚಾರ ಸಾಬೀತಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ಆಧರಿಸಿ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…