BREAKING NEWS

ಮೈಸೂರು ವಿವಿ ಕುಲಪತಿ ನೇಮಕಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ವಿವಿ ಕುಲಪತಿಯಾಗಿ ಪ್ರೊ. ಎನ್.ಕೆ.ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಅವರು ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದರು.

ಪ್ರೊ.ಶರತ್ ಅವರು ಯು.ಆರ್.ಅನಂತಮೂರ್ತಿ ಪುತ್ರ. ನಿಯಮಾವಳಿ ಉಲ್ಲಂಘಿಸಿ ಕುಲಪತಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಪ್ರಕರಣ ಇರುವವರನ್ನು ಕುಲಪತಿಯಾಗಿ ನೇಮಕ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಪ್ರೊ.ಎನ್.ಕೆ.ಲೋಕನಾಥ್ ಅವರಿಗೆ ಅರ್ಹತೆ ಇಲ್ಲದಿದ್ದರೂ ನೇಮಕಾತಿ ಮಾಡಲಾಗಿದೆ ಎಂದು ಪ್ರೊ.ಶರತ್ ಆರೋಪಿಸಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು.

andolanait

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

5 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

5 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

5 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago