BREAKING NEWS

ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್

ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ ಆದೇಶದಿಂದ ತಾತ್ಕಾಲಿತ ರಿಲೀಫ್ ದೊರೆತಿದೆ. ಹೈಕೋರ್ಟ್ ನಿಂದ ಸಿಕ್ಕಿರುವ ಈ ರಿಲೀಫ್ ಷರತ್ತುಬದ್ಧವಾಗಿದೆ.
ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2018ರಲ್ಲಿ ನಟ ಚೇತನ್‍ ಗೆ ನೀಡಲಾಗಿದ್ದ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನ್ನು ರದ್ದುಗೊಳಿಸಿತ್ತು.

ಚೇತನ್ ಪರ ವಾದ ಮಂಡಿಸಿದ ವಕೀಲರು ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.ವಾದ ಆಲಿಸಿದ ಕೋರ್ಟ್, ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

3 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

17 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago