ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ ಆದೇಶದಿಂದ ತಾತ್ಕಾಲಿತ ರಿಲೀಫ್ ದೊರೆತಿದೆ. ಹೈಕೋರ್ಟ್ ನಿಂದ ಸಿಕ್ಕಿರುವ ಈ ರಿಲೀಫ್ ಷರತ್ತುಬದ್ಧವಾಗಿದೆ.
ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2018ರಲ್ಲಿ ನಟ ಚೇತನ್ ಗೆ ನೀಡಲಾಗಿದ್ದ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನ್ನು ರದ್ದುಗೊಳಿಸಿತ್ತು.
ಚೇತನ್ ಪರ ವಾದ ಮಂಡಿಸಿದ ವಕೀಲರು ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.ವಾದ ಆಲಿಸಿದ ಕೋರ್ಟ್, ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…