ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ ಆದೇಶದಿಂದ ತಾತ್ಕಾಲಿತ ರಿಲೀಫ್ ದೊರೆತಿದೆ. ಹೈಕೋರ್ಟ್ ನಿಂದ ಸಿಕ್ಕಿರುವ ಈ ರಿಲೀಫ್ ಷರತ್ತುಬದ್ಧವಾಗಿದೆ.
ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2018ರಲ್ಲಿ ನಟ ಚೇತನ್ ಗೆ ನೀಡಲಾಗಿದ್ದ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನ್ನು ರದ್ದುಗೊಳಿಸಿತ್ತು.
ಚೇತನ್ ಪರ ವಾದ ಮಂಡಿಸಿದ ವಕೀಲರು ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.ವಾದ ಆಲಿಸಿದ ಕೋರ್ಟ್, ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…