BREAKING NEWS

ರಾಹುಲ್ ಗಾಂಧಿಗೆ ಶಾಕ್ ನೀಡಿದ ಹೈಕೋರ್ಟ್ : ಉಪನಾಮ ಕೇಸ್‌ ನಲ್ಲಿ ಮಧ್ಯಂತರ ತಡೆಗೆ ನಕಾರ

ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.

ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.

lokesh

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

11 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

11 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

12 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

12 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

12 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

12 hours ago