ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.
ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…