BREAKING NEWS

ಮಾನಸಿಕ ಅಸ್ವಸ್ಥ ಅತ್ಯಾಚಾರ ಸಂತ್ರಸ್ತೆಗೆ 10 ಪಟ್ಟು ಪರಿಹಾರ ಹೆಚ್ಚಿಸಿ ಹೈಕೋರ್ಟ್ ತೀರ್ಪು!

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ.

ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ ಪರಿಹಾರ ನೀಡಬೇಕು ಎಂದಿರುವ ಹೈಕೋರ್ಟ್, ವಿಶೇಷ ನ್ಯಾಯಾಲಯದ ಆಶಯಗಳು ಮತ್ತು ಕಲ್ಪನೆಗಳನ್ನು ಆಧರಿಸಿರಬಾರದು. 2020 ರ ನಿಯಮ 9 ರ ಆಧಾರದ ಮೇಲೆ ನಿರ್ಧರಿಸಬೇಕು ಮತ್ತು ರಾಷ್ಟ್ರೀಯ ಕಾನೂನ ಸೇವೆಗಳ ಪ್ರಾಧಿಕಾರದ ನಿಯಮವನ್ನು ಅನುಸರಿಸಬೇಕು ಎಂದು ನ್ಯಾಯಮೂರ್ತಿ ಅನಿಲ್ ಬಿ ಕಟ್ಟಿ ಹೇಳಿದ್ದಾರೆ.

ಕಾರವಾರದ ವಿಶೇಷ ನ್ಯಾಯಾಲಯವು 2022ರ ಜನವರಿ 18ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ 1 ಲಕ್ಷ ರೂ.ಗಳ ಪರಿಹಾರವನ್ನು ನೀಡಿತ್ತು. ಈ ಆದೇಶವನ್ನು ತಿರಸ್ಕರಿಸಿರುವ ಹೈಕೋರ್ಟ್ ಪರಿಹಾರವನ್ನು 10.50 ಲಕ್ಷಕ್ಕೆ ಹೆಚ್ಚಿಸಿದೆ.

ಅಪ್ರಾಪ್ತೆಯ ಪುನರ್ವಸತಿಗಾಗಿ ಮಧ್ಯಂತರ ಮತ್ತು ಅಂತಿಮ ಪರಿಹಾರವನ್ನು ನೀಡುವಾಗ ವಿಶೇಷ ನ್ಯಾಯಾಲಯಗಳ ಪಾತ್ರವು ಹೆಚ್ಚಿರುತ್ತದೆ. ಸಂತ್ರಸ್ತೆಯ ಕಲ್ಯಾಣಕ್ಕಾಗಿ ಅವರು ಪ್ರಾಯೋಗಿಕ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ವಿಶೇಷ ನ್ಯಾಯಾಲಯಗಳು ಸಾಕ್ಷಿ, ಸಂತ್ರಸ್ತರು ಅನುಭವಿಸಿದ ಗಾಯದ ಸ್ವರೂಪ, ಮತ್ತಿತರ ಸಂದರ್ಭಗಳನ್ನು ವಿಶ್ಲೇಷಿಸಿ ಪರಿಹಾರವನ್ನು ನಿರ್ಧರಿಸುವಾಗ ಪುನರ್ವಸತಿ, ವೈದ್ಯಕೀಯ ಚಿಕಿತ್ಸೆ ಮತ್ತು ಶಿಕ್ಷಣದ ಅಗತ್ಯವನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2010 ರಲ್ಲಿ,ಅಪ್ರಾಪ್ತೆಯ ಪೋಷಕರು ಮತ್ತು ಇಬ್ಬರು ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು. ಆಕೆ ಅಂಗವೈಕಲ್ಯ ಮತ್ತು ಮಾನಸಿಕ ಅಸ್ವಸ್ಥಳಾದ ಕಾರಣ ಶಾಲೆಗೆ ಹೋಗುತ್ತಿರಲಿಲ್ಲ, ಹೀಗಾಗಿ ಅಪ್ರಾಪ್ತೆಯನ್ನು ಅವರು ತಮ್ಮ ಜೊತೆ ಕರೆದೊಯ್ಯುತ್ತಿದ್ದರು. ಆಕೆಯ ತಾಯಿಯೊಂದಿಗೆ ಕೆಲಸ ಮಾಡುತ್ತಿದ್ದ ಆರೋಪಿ,  ಆಕೆಯ ಮನೆಯವರೊಂದಿಗಿನ ಪರಿಚಯದ ಲಾಭವನ್ನು ಪಡೆದುಕೊಂಡು ಅಡಿಕೆ ತೋಪಿಗೆ ಹೊತ್ತೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗೆ ಶಿಕ್ಷೆ ವಿಧಿಸುವಾಗ ವಿಚಾರಣಾ ನ್ಯಾಯಾಲಯವು ಕಾರವಾರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಡಿಎಲ್‌ಎಸ್‌ಎ) ಯುವತಿಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಡೆಪಾಸಿಟ್ ಮಾಡುವಂತೆ ಸೂಚಿಸಿತ್ತು.

ಜೂನ್ 2022 ರಲ್ಲಿ, DLSA ನ ಸದಸ್ಯ ಕಾರ್ಯದರ್ಶಿ  ಸಂತ್ರಸ್ತೆಗೆ ಪರಿಹಾರ ಬಿಡುಗಡೆ ಮಾಡಲು ವಿನಂತಿಸಿದರು. NALSA ರೂಪಿಸಿದ ಮಾದರಿ ಸಂತ್ರಸ್ತ ಪರಿಹಾರ ಯೋಜನೆ ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಹೆಚ್ಚಳ ಮಾಡುವಂತೆ  ಮೇಲ್ಮನವಿ ಸಲ್ಲಿಸಲು DLSA ಗೆ KSLSA ನಿರ್ದೇಶನ ನೀಡಿತು. ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

andolanait

Recent Posts

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 mins ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

2 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

3 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

3 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

3 hours ago