BREAKING NEWS

ಮಾನಸಿಕ ಅಸ್ವಸ್ಥ ಅತ್ಯಾಚಾರ ಸಂತ್ರಸ್ತೆಗೆ 10 ಪಟ್ಟು ಪರಿಹಾರ ಹೆಚ್ಚಿಸಿ ಹೈಕೋರ್ಟ್ ತೀರ್ಪು!

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ.

ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ ಪರಿಹಾರ ನೀಡಬೇಕು ಎಂದಿರುವ ಹೈಕೋರ್ಟ್, ವಿಶೇಷ ನ್ಯಾಯಾಲಯದ ಆಶಯಗಳು ಮತ್ತು ಕಲ್ಪನೆಗಳನ್ನು ಆಧರಿಸಿರಬಾರದು. 2020 ರ ನಿಯಮ 9 ರ ಆಧಾರದ ಮೇಲೆ ನಿರ್ಧರಿಸಬೇಕು ಮತ್ತು ರಾಷ್ಟ್ರೀಯ ಕಾನೂನ ಸೇವೆಗಳ ಪ್ರಾಧಿಕಾರದ ನಿಯಮವನ್ನು ಅನುಸರಿಸಬೇಕು ಎಂದು ನ್ಯಾಯಮೂರ್ತಿ ಅನಿಲ್ ಬಿ ಕಟ್ಟಿ ಹೇಳಿದ್ದಾರೆ.

ಕಾರವಾರದ ವಿಶೇಷ ನ್ಯಾಯಾಲಯವು 2022ರ ಜನವರಿ 18ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ 1 ಲಕ್ಷ ರೂ.ಗಳ ಪರಿಹಾರವನ್ನು ನೀಡಿತ್ತು. ಈ ಆದೇಶವನ್ನು ತಿರಸ್ಕರಿಸಿರುವ ಹೈಕೋರ್ಟ್ ಪರಿಹಾರವನ್ನು 10.50 ಲಕ್ಷಕ್ಕೆ ಹೆಚ್ಚಿಸಿದೆ.

ಅಪ್ರಾಪ್ತೆಯ ಪುನರ್ವಸತಿಗಾಗಿ ಮಧ್ಯಂತರ ಮತ್ತು ಅಂತಿಮ ಪರಿಹಾರವನ್ನು ನೀಡುವಾಗ ವಿಶೇಷ ನ್ಯಾಯಾಲಯಗಳ ಪಾತ್ರವು ಹೆಚ್ಚಿರುತ್ತದೆ. ಸಂತ್ರಸ್ತೆಯ ಕಲ್ಯಾಣಕ್ಕಾಗಿ ಅವರು ಪ್ರಾಯೋಗಿಕ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ವಿಶೇಷ ನ್ಯಾಯಾಲಯಗಳು ಸಾಕ್ಷಿ, ಸಂತ್ರಸ್ತರು ಅನುಭವಿಸಿದ ಗಾಯದ ಸ್ವರೂಪ, ಮತ್ತಿತರ ಸಂದರ್ಭಗಳನ್ನು ವಿಶ್ಲೇಷಿಸಿ ಪರಿಹಾರವನ್ನು ನಿರ್ಧರಿಸುವಾಗ ಪುನರ್ವಸತಿ, ವೈದ್ಯಕೀಯ ಚಿಕಿತ್ಸೆ ಮತ್ತು ಶಿಕ್ಷಣದ ಅಗತ್ಯವನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2010 ರಲ್ಲಿ,ಅಪ್ರಾಪ್ತೆಯ ಪೋಷಕರು ಮತ್ತು ಇಬ್ಬರು ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು. ಆಕೆ ಅಂಗವೈಕಲ್ಯ ಮತ್ತು ಮಾನಸಿಕ ಅಸ್ವಸ್ಥಳಾದ ಕಾರಣ ಶಾಲೆಗೆ ಹೋಗುತ್ತಿರಲಿಲ್ಲ, ಹೀಗಾಗಿ ಅಪ್ರಾಪ್ತೆಯನ್ನು ಅವರು ತಮ್ಮ ಜೊತೆ ಕರೆದೊಯ್ಯುತ್ತಿದ್ದರು. ಆಕೆಯ ತಾಯಿಯೊಂದಿಗೆ ಕೆಲಸ ಮಾಡುತ್ತಿದ್ದ ಆರೋಪಿ,  ಆಕೆಯ ಮನೆಯವರೊಂದಿಗಿನ ಪರಿಚಯದ ಲಾಭವನ್ನು ಪಡೆದುಕೊಂಡು ಅಡಿಕೆ ತೋಪಿಗೆ ಹೊತ್ತೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗೆ ಶಿಕ್ಷೆ ವಿಧಿಸುವಾಗ ವಿಚಾರಣಾ ನ್ಯಾಯಾಲಯವು ಕಾರವಾರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಡಿಎಲ್‌ಎಸ್‌ಎ) ಯುವತಿಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಡೆಪಾಸಿಟ್ ಮಾಡುವಂತೆ ಸೂಚಿಸಿತ್ತು.

ಜೂನ್ 2022 ರಲ್ಲಿ, DLSA ನ ಸದಸ್ಯ ಕಾರ್ಯದರ್ಶಿ  ಸಂತ್ರಸ್ತೆಗೆ ಪರಿಹಾರ ಬಿಡುಗಡೆ ಮಾಡಲು ವಿನಂತಿಸಿದರು. NALSA ರೂಪಿಸಿದ ಮಾದರಿ ಸಂತ್ರಸ್ತ ಪರಿಹಾರ ಯೋಜನೆ ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಹೆಚ್ಚಳ ಮಾಡುವಂತೆ  ಮೇಲ್ಮನವಿ ಸಲ್ಲಿಸಲು DLSA ಗೆ KSLSA ನಿರ್ದೇಶನ ನೀಡಿತು. ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

17 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago