BREAKING NEWS

ಪಿಎಸ್‌ಐ ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಹೈ

ಬೆಂಗಳೂರು : ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನು ಶುಕ್ರವಾರ ಹೈಕೋರ್ಟ್‌ ಎತ್ತಿ ಹಿಡಿದಿದ್ದು, ಸ್ವತಂತ್ರ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

545 ಪಿಎಸ್‌ಐ ಹುದ್ದೆಗೆ ನೇಮಕಾತಿ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನೇಮಕಾತಿ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲು ಹೈ ಅವಕಾಶ ನೀಡಿದೆ. ನೇಮಕಾತಿಯಲ್ಲಿ ಅಕ್ರಮ ನಡೆಯದಂತೆ ತೆಡಯಲು ಸ್ವತಂತ್ರ ಏಜೆನ್ಸಿಯ ಮೂಲಕ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಹೈಕೋರ್ಟ್‌ ಇದೇ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದೆ.

ರಾಜ್ಯ ಸರ್ಕಾರ ಏಪ್ರಿಲ್‌ 29, 2022ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 28, 2022 ರಂದು ನ್ಯಾಯಾಲಯವು ಅರ್ಜಿದಾರರ ವಿಚಾರಣೆಯ ನಂತರ ಏಪ್ರಿಲ್ 29, 2022 ರ ಆದೇಶದ ಅನ್ವಯ ಲಿಖಿತ ಪರೀಕ್ಷೆಯನ್ನು ನಡೆಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.ಏಪ್ರಿಲ್ 10, 2023 ರ ಆದೇಶವನ್ನು ಅನುಸರಿಸಿ, ಪೊಲೀಸ್ ವರಿಷ್ಠಾಧಿಕಾರಿ, ಹಣಕಾಸು ಗುಪ್ತಚರ ಘಟಕ, ಸಿಐಡಿ, ಬೆಂಗಳೂರು, ಅದರ ಡಿಟೆಕ್ಟಿವ್ ಇನ್ಸ್‌ಪೆಕ್ಟರ್ ಶಿವಪ್ರಸಾದ್ ಅವರು ನ್ಯಾಯಾಲಯಕ್ಕೆ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಸಲ್ಲಿಸಿದ್ದರು.

ಪಿಎಸ್‌ಐ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠವು ಆಗಸ್ಟ್‌ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.

ಪಿಎಸ್ ಐ ನೇಮಕಾತಿ ಅಕ್ರಮ: ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.

ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಸೇರಿದಂತೆ ಹಲವು ಆರೋಪಿಗಳನ್ನು ಸಿಐಡಿ ಬಂಧಿಸಿತ್ತು. ಅಮೃತ್ ಪಾಲ್ ಅವರನ್ನು ಜುಲೈ 4, 2022 ರಂದು ಸಿಐಡಿ ಬಂಧಿಸಿತ್ತು.

andolanait

Recent Posts

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

48 mins ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

1 hour ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 hours ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

2 hours ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

2 hours ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

3 hours ago