ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್ 29) ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿಯಲ್ಲ, ನಮ್ಮ ವಕೀಲರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ. ಕೋರ್ಟ್ ವಿಚಾರದಲ್ಲಿ ದೂರ ಇರುವುದೇ ಮೇಲು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.
ಯತ್ನಾಳ್ ಸೇರಿದಂತೆ ಯಾರು ಬೇಕಾದರು ಏನಾದರೂ ತಿಳಿದುಕೊಳ್ಳಲಿ, ಅವರ ಆಚಾರ, ವಿಚಾರ, ಭಾವನೆ ಮಾತನ್ನು ಬಹಳ ನಮೃತೆಯಿಂದ ಗಮನಿಸಿದ್ದೇನೆ ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತೇನೆ ಎಂದು ಯತ್ನಾಳ್ ಆರೋಪಕ್ಕೆ ಟಾಂಗ್ ಕೊಟ್ಟರು.
ಜನರೇ ನೋಡಿದ್ದಾರೆ ನಾನೇನು ತಪ್ಪು ಮಾಡಿಲ್ಲ ಎಲ್ಲವನ್ನು ಪಾರ್ಟಿಗಾಗಿ ಮಾಡಿದ್ದೇನೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಕ್ಕೆ ಮಾಡಿದಕ್ಕೆ ತೊದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಡುತ್ತೇನೆ ಎಂದರೆ ಆ ಭಗವಂತ ನನ್ನ ಪರವಾಗಿದ್ದಾನೆ, ನಾಡಿನ ಜನತಯಿದ್ದಾರೆ. ನನಗೆ ತೊಂದರೆ ಕೊಟ್ಟವರಿಗೆ ಈ ರಾಜ್ಯದಲ್ಲಿ ಏನಾಗಿದೆ ಎಂದು ಜನರಿಗೆ ಗೊತ್ತಿದೆ. ನನ್ನ ಪರವಾಗಿ ನಿಂತ ಜನರೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸಚಿವರಾದ ಎಂ. ಬಿ. ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…