ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್ 29) ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿಯಲ್ಲ, ನಮ್ಮ ವಕೀಲರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ. ಕೋರ್ಟ್ ವಿಚಾರದಲ್ಲಿ ದೂರ ಇರುವುದೇ ಮೇಲು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.
ಯತ್ನಾಳ್ ಸೇರಿದಂತೆ ಯಾರು ಬೇಕಾದರು ಏನಾದರೂ ತಿಳಿದುಕೊಳ್ಳಲಿ, ಅವರ ಆಚಾರ, ವಿಚಾರ, ಭಾವನೆ ಮಾತನ್ನು ಬಹಳ ನಮೃತೆಯಿಂದ ಗಮನಿಸಿದ್ದೇನೆ ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತೇನೆ ಎಂದು ಯತ್ನಾಳ್ ಆರೋಪಕ್ಕೆ ಟಾಂಗ್ ಕೊಟ್ಟರು.
ಜನರೇ ನೋಡಿದ್ದಾರೆ ನಾನೇನು ತಪ್ಪು ಮಾಡಿಲ್ಲ ಎಲ್ಲವನ್ನು ಪಾರ್ಟಿಗಾಗಿ ಮಾಡಿದ್ದೇನೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಕ್ಕೆ ಮಾಡಿದಕ್ಕೆ ತೊದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಡುತ್ತೇನೆ ಎಂದರೆ ಆ ಭಗವಂತ ನನ್ನ ಪರವಾಗಿದ್ದಾನೆ, ನಾಡಿನ ಜನತಯಿದ್ದಾರೆ. ನನಗೆ ತೊಂದರೆ ಕೊಟ್ಟವರಿಗೆ ಈ ರಾಜ್ಯದಲ್ಲಿ ಏನಾಗಿದೆ ಎಂದು ಜನರಿಗೆ ಗೊತ್ತಿದೆ. ನನ್ನ ಪರವಾಗಿ ನಿಂತ ಜನರೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸಚಿವರಾದ ಎಂ. ಬಿ. ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿದ್ದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…