BREAKING NEWS

ಮೇಲ್ಮನವಿ ವಾಪಾಸ್‌ಗೆ ಹೈ ಅನುಮತಿ: ಡಿಕೆಶಿ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು : ನಾನೇನೆ ಕೆಲಸ ಮಾಡಿದ್ದರೂ ಅದನ್ನು ಪಕ್ಷಕ್ಕಾಗಿ ಮಾಡಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನನ್ನ ಪಾಲಿಗೆ ಭಗಂತನಿದ್ದಾನೆ ಎಂದು ಬುಧವಾರ (ನವೆಂಬರ್‌ 29) ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್‌ ತೀರ್ಪಿನ ಬಗ್ಗೆ ನನಗೆ ಮಾಹಿತಿಯಲ್ಲ, ನಮ್ಮ ವಕೀಲರ ಬಳಿ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ. ಕೋರ್ಟ್‌ ವಿಚಾರದಲ್ಲಿ ದೂರ ಇರುವುದೇ ಮೇಲು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.

ಯತ್ನಾಳ್‌ ಸೇರಿದಂತೆ ಯಾರು ಬೇಕಾದರು ಏನಾದರೂ ತಿಳಿದುಕೊಳ್ಳಲಿ, ಅವರ ಆಚಾರ, ವಿಚಾರ, ಭಾವನೆ ಮಾತನ್ನು ಬಹಳ ನಮೃತೆಯಿಂದ ಗಮನಿಸಿದ್ದೇನೆ ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರ ಕೊಡುತೇನೆ ಎಂದು ಯತ್ನಾಳ್‌ ಆರೋಪಕ್ಕೆ ಟಾಂಗ್‌ ಕೊಟ್ಟರು.

ಜನರೇ ನೋಡಿದ್ದಾರೆ ನಾನೇನು ತಪ್ಪು ಮಾಡಿಲ್ಲ ಎಲ್ಲವನ್ನು ಪಾರ್ಟಿಗಾಗಿ ಮಾಡಿದ್ದೇನೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಕ್ಕೆ ಮಾಡಿದಕ್ಕೆ ತೊದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಡುತ್ತೇನೆ ಎಂದರೆ ಆ ಭಗವಂತ ನನ್ನ ಪರವಾಗಿದ್ದಾನೆ, ನಾಡಿನ ಜನತಯಿದ್ದಾರೆ. ನನಗೆ ತೊಂದರೆ ಕೊಟ್ಟವರಿಗೆ ಈ ರಾಜ್ಯದಲ್ಲಿ ಏನಾಗಿದೆ ಎಂದು ಜನರಿಗೆ ಗೊತ್ತಿದೆ. ನನ್ನ ಪರವಾಗಿ ನಿಂತ ಜನರೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಸಚಿವರಾದ ಎಂ. ಬಿ. ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಜೊತೆಯಲ್ಲಿದ್ದರು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

2 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

3 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

13 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

13 hours ago