BREAKING NEWS

ಅಧಿಕ ಉಷ್ಣಾಂಶ : ಮುನ್ನೆಚ್ಚರಿಕೆಗೆ ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಅಧಿಕ ಉಷ್ಣಾಂಶದ ಕಾರಣ ಮುಂದಿನ ಕೆಲ ದಿನಗಳು ಮಕ್ಕಳು, ವೃದ್ಧರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಅನಾರೋಗ್ಯ ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಅವಧಿಯಲ್ಲಿ ಅತಿನೇರಳೆ ಕಿರಣಗಳು ತೀಕ್ಷ್ಣವಾಗಿರುತ್ತವೆ. ಆದ್ದರಿಂದ ಮಕ್ಕಳು ಹಾಗೂ ವೃದ್ಧರ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಸಾಂಕ್ರಾಮಿಕ ರೋಗತಡೆಗೆ ಶುದ್ಧ ನೀರು ಕುಡಿಯುವುದು ಬಹಳ ಮುಖ್ಯ. ರಸ್ತೆ ಬದಿಯಲ್ಲಿ ತೆರೆದಿಟ್ಟ ಆಹಾರ ಪದಾರ್ಥ ಹಾಗೂ ಕತ್ತರಿಸಿದ ಹಣ್ಣುಗಳನ್ನು ತಿನ್ನುವುದರಿಂದ ರೋಗಾಣುಗಳು ಹರಡಿ, ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಹೇಳಿದೆ.

ಮಕ್ಕಳನ್ನು ಶಾಖದ ಅಲೆಯಿಂದ ರಕ್ಷಿಸಲು ನಿಂಬೆ ಹಣ್ಣಿನ ರಸ ಸೇರಿಸಿದ ನೀರು, ಮಜ್ಜಿಗೆ, ಎಳನೀರು, ತಾಜಾ ಹಣ್ಣಿನ ರಸ ನೀಡಬೇಕು. ತಿಳಿ ಬಣ್ಣದ, ಹಗುರವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ತಾಜಾ ಹಣ್ಣುಗಳು, ಸಲಾಡ್‌ಗಳು, ಮನೆಯಲ್ಲಿ ತಯಾರಿಸಿದ ಊಟ ಸೇವಿಸಬೇಕು. ಹೊರಗಿನ ಆಹಾರ ಸುರಕ್ಷಿತವಲ್ಲ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಆದಷ್ಟೂ ಒಳಾಂಗಣ ಪ್ರದೇಶದಲ್ಲಿ ಇರಬೇಕು ಎಂದು ತಿಳಿಸಿದೆ.

lokesh

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

10 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

12 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

14 hours ago