ಬೆಂಗಳೂರು: ಅಧಿಕ ಉಷ್ಣಾಂಶದ ಕಾರಣ ಮುಂದಿನ ಕೆಲ ದಿನಗಳು ಮಕ್ಕಳು, ವೃದ್ಧರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಅನಾರೋಗ್ಯ ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಈ ಅವಧಿಯಲ್ಲಿ ಅತಿನೇರಳೆ ಕಿರಣಗಳು ತೀಕ್ಷ್ಣವಾಗಿರುತ್ತವೆ. ಆದ್ದರಿಂದ ಮಕ್ಕಳು ಹಾಗೂ ವೃದ್ಧರ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಸಾಂಕ್ರಾಮಿಕ ರೋಗತಡೆಗೆ ಶುದ್ಧ ನೀರು ಕುಡಿಯುವುದು ಬಹಳ ಮುಖ್ಯ. ರಸ್ತೆ ಬದಿಯಲ್ಲಿ ತೆರೆದಿಟ್ಟ ಆಹಾರ ಪದಾರ್ಥ ಹಾಗೂ ಕತ್ತರಿಸಿದ ಹಣ್ಣುಗಳನ್ನು ತಿನ್ನುವುದರಿಂದ ರೋಗಾಣುಗಳು ಹರಡಿ, ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಹೇಳಿದೆ.
ಮಕ್ಕಳನ್ನು ಶಾಖದ ಅಲೆಯಿಂದ ರಕ್ಷಿಸಲು ನಿಂಬೆ ಹಣ್ಣಿನ ರಸ ಸೇರಿಸಿದ ನೀರು, ಮಜ್ಜಿಗೆ, ಎಳನೀರು, ತಾಜಾ ಹಣ್ಣಿನ ರಸ ನೀಡಬೇಕು. ತಿಳಿ ಬಣ್ಣದ, ಹಗುರವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ತಾಜಾ ಹಣ್ಣುಗಳು, ಸಲಾಡ್ಗಳು, ಮನೆಯಲ್ಲಿ ತಯಾರಿಸಿದ ಊಟ ಸೇವಿಸಬೇಕು. ಹೊರಗಿನ ಆಹಾರ ಸುರಕ್ಷಿತವಲ್ಲ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಆದಷ್ಟೂ ಒಳಾಂಗಣ ಪ್ರದೇಶದಲ್ಲಿ ಇರಬೇಕು ಎಂದು ತಿಳಿಸಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…