ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ. ಈ ಮೂಲಕ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್, ಬಿಜೆಪಿ ನಡುವಿನ ಹಿಜಾಬ್ ನಿಷೇಧ ಮತ್ತೆ ಭುಗಿಲೇಳಲಿದೆಯಾ ಎಂಬುದನ್ನು ಕಾಣಬೇಕಿದೆ.
ಇನ್ನು ಈ ವಿಚಾರವನ್ನು ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಹೇಗೆ ಅಸ್ತ್ರವಾಗಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…