BREAKING NEWS

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ. ಈ ಮೂಲಕ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ‌ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.

ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಸರ್ಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್‌, ಬಿಜೆಪಿ ನಡುವಿನ ಹಿಜಾಬ್‌ ನಿಷೇಧ ಮತ್ತೆ ಭುಗಿಲೇಳಲಿದೆಯಾ ಎಂಬುದನ್ನು ಕಾಣಬೇಕಿದೆ.

ಇನ್ನು ಈ ವಿಚಾರವನ್ನು ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಹೇಗೆ ಅಸ್ತ್ರವಾಗಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

6 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

7 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

7 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

7 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

8 hours ago