BREAKING NEWS

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ. ಈ ಮೂಲಕ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ‌ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.

ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಸರ್ಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್‌, ಬಿಜೆಪಿ ನಡುವಿನ ಹಿಜಾಬ್‌ ನಿಷೇಧ ಮತ್ತೆ ಭುಗಿಲೇಳಲಿದೆಯಾ ಎಂಬುದನ್ನು ಕಾಣಬೇಕಿದೆ.

ಇನ್ನು ಈ ವಿಚಾರವನ್ನು ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಹೇಗೆ ಅಸ್ತ್ರವಾಗಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

10 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

10 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

10 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

10 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago