ಮೈಸೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ. ಈ ಮೂಲಕ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು.
ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್, ಬಿಜೆಪಿ ನಡುವಿನ ಹಿಜಾಬ್ ನಿಷೇಧ ಮತ್ತೆ ಭುಗಿಲೇಳಲಿದೆಯಾ ಎಂಬುದನ್ನು ಕಾಣಬೇಕಿದೆ.
ಇನ್ನು ಈ ವಿಚಾರವನ್ನು ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಹೇಗೆ ಅಸ್ತ್ರವಾಗಿ ಬಳಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…