BREAKING NEWS

ಹಿಮಾಚಲ ಪ್ರದೇಶ ಪ್ರವಾಹ: ಕೇಂದ್ರದಿಂದ ಮಧ್ಯಂತರ ಪರಿಹಾರ ಕೋರಿದ ಸಿಎಂ

ಶಿಮ್ಲಾ: ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಇನ್ನು ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಲು ಪರಿಹಾರ ನಿಯಮಗಳನ್ನು ಬದಲಾಯಿಸಲಾಗುವುದು ಎಂದು ಸುಖು ಹೇಳಿದರು.
ಕಳೆದ ವಾರ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭಾರೀ ಪ್ರಮಾಣದ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ರಸ್ತೆಗಳು, ಸೇತುವೆಗಳು ಹಾನಿಗೊಳಗಾಗಿವೆ. ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು 2,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ನೀಡುವಂತೆ ಮನವಿ ಮಾಡಿದ್ದೇನೆ ಎಂದು ಸುಖು ಶುಕ್ರವಾರ ಹೇಳಿದರು.

ರಾಜ್ಯಕ್ಕೆ 4,000 ಕೋಟಿ ನಷ್ಟ ಉಂಟಾಗಿದ್ದು, ಈ ಪ್ರಮಾಣ ಹೆಚ್ಚಾಗಬಹುದು ಎಂದು ಮಾಹಿತಿ ನೀಡಿದರು. ಸಂತ್ರಸ್ತ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸುಖು ಘೋಷಿಸಿದ್ದರು. ಪರಿಹಾರ ಮೊತ್ತವನ್ನು ಹೆಚ್ಚಿಸಲು ಪರಿಹಾರ ನಿಯಮಗಳನ್ನು ಬದಲಾಯಿಸಲಾಗುವುದು ಎಂದು ಅವರು ಹೇಳಿದರು. ರಿಲೀಫ್ ಮ್ಯಾನ್ಯುಯಲ್ ಪ್ರಕಾರ, ಪ್ರಸ್ತುತ ದುರಂತದಲ್ಲಿ ಪ್ರತಿ ಸಂತ್ರಸ್ತರಿಗೆ ರೂ 5,000 ಪರಿಹಾರವನ್ನು ನೀಡಲಾಗುತ್ತದೆ.

ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ನಿರ್ಧಾರ
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ವಿಪತ್ತು ಪರಿಹಾರ ನಿಧಿಯನ್ನು ಸ್ಥಾಪಿಸಲಾಗಿದೆ. ಅಲ್ಲದೆ ತಮ್ಮ ಸರ್ಕಾರದ ಎಲ್ಲಾ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸಂತ್ರಸ್ತರ ಸಹಾಯಕ್ಕಾಗಿ ಒಂದು ತಿಂಗಳ ವೇತನವನ್ನು ನೀಡಲು ನಿರ್ಧರಿಸಿದ್ದಾರೆ. ಭಾರತೀಯ ಆಡಳಿತ ಸೇವೆ ಮತ್ತು ಹಿಮಾಚಲ ಆಡಳಿತ ಸೇವೆಯ ಅಧಿಕಾರಿಗಳ ಸಂಘ ಮತ್ತು ಇತರರು ಸಹ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.

“ನಾವು ಬಿಜೆಪಿ ಶಾಸಕರನ್ನು ಅದೇ ರೀತಿ ಮಾಡುವಂತೆ ವಿನಂತಿಸುತ್ತೇವೆ ಎಂದು ಸುಖು ಹೇಳಿದರು. ಅವರು ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ರಕ್ಷಣೆ, ಸ್ಥಳಾಂತರಿಸುವಿಕೆ ಮತ್ತು ಮರುಸ್ಥಾಪನೆ ಎಂಬ ಮೂರು ಅಂಶಗಳ ಕಾರ್ಯತಂತ್ರವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು. ಲಾಹೌಲ್ ಮತ್ತು ಸ್ಪಿತಿಯಲ್ಲಿ ಹಿಮಪಾತದ ಚಂದ್ರತಾಲ್‌ನಲ್ಲಿ ಸಿಲುಕಿದ್ದ 250 ಪ್ರವಾಸಿಗರು ಸೇರಿದಂತೆ ಸುಮಾರು 67,000 ಪ್ರವಾಸಿಗರನ್ನು ರಕ್ಷಿಸಲಾಗಿದೆ. ಈಗ ಮೂಲಸೌಕರ್ಯಗಳನ್ನು ಸರಿಪಡಿಸುವತ್ತ ಗಮನ ಹರಿಸಲಾಗಿದೆ. ಕೆಲವು ಪ್ರವಾಸಿಗರು ಕಸೋಲ್ ಮತ್ತು ತೀರ್ಥನ್ ಕಣಿವೆಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಹೇಳಿದರು. ಅವರೆಲ್ಲರೂ ಸುರಕ್ಷಿತವಾಗಿದ್ದು, ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲಾಗಿದೆ ಎಂದರು.

40ಕ್ಕೂ ಹೆಚ್ಚು ಸೇತುವೆಗಳು ಒಡೆದು, ಶೇ.80ರಷ್ಟು ನೀರಿನ ಯೋಜನೆಗಳು ಕೊಚ್ಚಿ ಹೋಗಿವೆ
ಕೇಂದ್ರದಿಂದ ಬಂದಿರುವ 180 ಕೋಟಿ ರೂ.ಗಳು ರಾಜ್ಯಕ್ಕೆ ಮುಂಗಾರು ಅವಧಿಯಲ್ಲಿ ನೀಡುವ ವಾರ್ಷಿಕ ನೆರವು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ರಾಜ್ಯ ಸರ್ಕಾರದಿಂದ ಇನ್ನೂ ಧನ ಸಹಾಯ ಸಿಕ್ಕಿಲ್ಲ ಎಂದರು. ರಾಜ್ಯ ವಿಪತ್ತು ಪ್ರತಿಕ್ರಿಯೆ ಕೇಂದ್ರದ ಪ್ರಕಾರ, ಜೂನ್ 26 ರಂದು ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರಾರಂಭವಾದಾಗಿನಿಂದ 108 ಜನರು ಸಾವನ್ನಪ್ಪಿದ್ದಾರೆ. 12 ಮಂದಿ ನಾಪತ್ತೆಯಾಗಿದ್ದಾರೆ. ರಾಜ್ಯದಲ್ಲಿ 667 ಮನೆಗಳು ಸಂಪೂರ್ಣ ನಾಶವಾಗಿವೆ. ಅದೇ ಸಮಯದಲ್ಲಿ, 1,264 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ಹಿಮಾಚಲದಲ್ಲಿ ಕಳೆದ 24 ಗಂಟೆಗಳಲ್ಲಿ 17 ಮಂದಿ ಬಲಿಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಹಂಗಾಮಿ ಪೊಲೀಸ್ ಮಹಾನಿರ್ದೇಶಕ ಸತ್ವಂತ್ ಅತ್ವಾಲ್ ಅವರು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಪೊಲೀಸ್ ತಂಡಗಳು ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆಗಳನ್ನು ನಿರ್ಬಂಧಿಸಿರುವ ಆಂತರಿಕ ಪ್ರದೇಶಗಳತ್ತ ಸಾಗುತ್ತಿವೆ. ಕಸೋಲ್, ಮಣಿಕರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರು ತಮ್ಮ ವಾಹನಗಳಿಲ್ಲದೆ ಹೊರಡಲು ನಿರಾಕರಿಸಿದ್ದಾರೆ ಮತ್ತು ಪರಿಸ್ಥಿತಿ ಸಹಜವಾಗುವವರೆಗೆ ಹಿಂತಿರುಗಲು ನಿರ್ಧರಿಸಿದ್ದಾರೆ ಎಂದು ಅತ್ವಾಲ್ ಹೇಳಿದರು.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

11 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

24 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

30 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

38 mins ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

48 mins ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

51 mins ago