BREAKING NEWS

ʼರಾಜ್ಯ ನೈಸರ್ಗಿಕ ವಿಕೋಪʼ ಘೋಷಣೆ ಮಾಡಿದ ಹಿಮಾಚಲ ಪ್ರದೇಶ ಸರ್ಕಾರ

ಶಿಮ್ಲಾ : ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯ ನೈಸರ್ಗಿಕ ವಿಕೋಪ ಎಂದು ಘೋಷಿಸಿದೆ.

ಶುಕ್ರವಾರದ ಅಂತ್ಯಕ್ಕೆ ಮಳೆಪೀಡಿತ ಹಿಮಾಚಲ ಪ್ರದೇಶದಲ್ಲಿ ಒಟ್ಟು 77 ಮಂದಿ ಮೃತಪಟ್ಟಿರುವ ಬೆನ್ನಿಗೇ ಈ ಘೋಷಣೆ ಹೊರ ಬಿದ್ದಿದೆ. ಇದಲ್ಲದೆ ಬೇಸಿಗೆ ಗುಡ್ಡಗಾಡು ಪ್ರದೇಶದಲ್ಲಿರುವ ಶಿವ ದೇವಾಲಯದ ಅವಶೇಷಗಳಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಭಾರಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ಈವರಗೆ ಅಧಿಕೃತವಾಗಿ 77ಕ್ಕೆ ಏರಿಕೆಯಾಗಿದೆ.

ಶಿವ ದೇವಾಲಯದ ಅವಶೇಷಗಳಡಿ ಇನ್ನೂ ನಾಲ್ಕು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ PTI ಸುದ್ದಿ ಸಂಸ್ಥೆಗೆ ತಿಳಸಿದ್ದಾರೆ.

ರಾಜ್ಯದಲ್ಲಿ ಪ್ರಕಟವಾಗಿರುವ ರಾಜ್ಯ ಅಧಿಸೂಚನೆಯ ಪ್ರಕಾರ, ಭಾರಿ ಮಳೆಯಿಂದ ಆಗಿರುವ ಜೀವ ಹಾನಿಯನ್ನು ಗಣನೆಗೆ ತೆಗೆದುಕೊಂಡು ಸಂಪೂರ್ಣ ಗುಡ್ಡಗಾಡು ರಾಜ್ಯವನ್ನು “ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯ” ಎಂದು ಘೋಷಿಸಲಾಗಿದೆ.

ರವಿವಾರದಿಂದ ಈ ಗುಡ್ಡುಗಾಡು ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು, ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ವಿಶೇಷವಾಗಿ ಭಾರಿ ಪ್ರವಾಹದಿಂದ ಮನೆ ಹಾನಿಗೀಡಾಗಿರುವವರು ಹಾಗೂ ಭೂಕುಸಿತಕ್ಕೆ ಸಿಲುಕಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ತನ್ನದೇ ಸಂಪನ್ಮೂಲಗಳ ಮೂಲಕ ನೆರವು ನೀಡಲಿದೆ ಎಂದು ಮುಖ್ಯಮಮತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

18 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago