BREAKING NEWS

ʼರಾಜ್ಯ ನೈಸರ್ಗಿಕ ವಿಕೋಪʼ ಘೋಷಣೆ ಮಾಡಿದ ಹಿಮಾಚಲ ಪ್ರದೇಶ ಸರ್ಕಾರ

ಶಿಮ್ಲಾ : ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯ ನೈಸರ್ಗಿಕ ವಿಕೋಪ ಎಂದು ಘೋಷಿಸಿದೆ.

ಶುಕ್ರವಾರದ ಅಂತ್ಯಕ್ಕೆ ಮಳೆಪೀಡಿತ ಹಿಮಾಚಲ ಪ್ರದೇಶದಲ್ಲಿ ಒಟ್ಟು 77 ಮಂದಿ ಮೃತಪಟ್ಟಿರುವ ಬೆನ್ನಿಗೇ ಈ ಘೋಷಣೆ ಹೊರ ಬಿದ್ದಿದೆ. ಇದಲ್ಲದೆ ಬೇಸಿಗೆ ಗುಡ್ಡಗಾಡು ಪ್ರದೇಶದಲ್ಲಿರುವ ಶಿವ ದೇವಾಲಯದ ಅವಶೇಷಗಳಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಭಾರಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ಈವರಗೆ ಅಧಿಕೃತವಾಗಿ 77ಕ್ಕೆ ಏರಿಕೆಯಾಗಿದೆ.

ಶಿವ ದೇವಾಲಯದ ಅವಶೇಷಗಳಡಿ ಇನ್ನೂ ನಾಲ್ಕು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ PTI ಸುದ್ದಿ ಸಂಸ್ಥೆಗೆ ತಿಳಸಿದ್ದಾರೆ.

ರಾಜ್ಯದಲ್ಲಿ ಪ್ರಕಟವಾಗಿರುವ ರಾಜ್ಯ ಅಧಿಸೂಚನೆಯ ಪ್ರಕಾರ, ಭಾರಿ ಮಳೆಯಿಂದ ಆಗಿರುವ ಜೀವ ಹಾನಿಯನ್ನು ಗಣನೆಗೆ ತೆಗೆದುಕೊಂಡು ಸಂಪೂರ್ಣ ಗುಡ್ಡಗಾಡು ರಾಜ್ಯವನ್ನು “ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯ” ಎಂದು ಘೋಷಿಸಲಾಗಿದೆ.

ರವಿವಾರದಿಂದ ಈ ಗುಡ್ಡುಗಾಡು ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು, ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ವಿಶೇಷವಾಗಿ ಭಾರಿ ಪ್ರವಾಹದಿಂದ ಮನೆ ಹಾನಿಗೀಡಾಗಿರುವವರು ಹಾಗೂ ಭೂಕುಸಿತಕ್ಕೆ ಸಿಲುಕಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ತನ್ನದೇ ಸಂಪನ್ಮೂಲಗಳ ಮೂಲಕ ನೆರವು ನೀಡಲಿದೆ ಎಂದು ಮುಖ್ಯಮಮತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

10 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

23 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

23 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

23 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

24 hours ago