ನವದೆಹಲಿ : ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಸಾಕ್ಷಿದಾರರಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
”ಭಾರತವು ವಿವಿಧ ಜಾತಿ, ಧರ್ಮ, ಭಾಷೆಗಳನ್ನು ಹೊಂದಿರುವ ದೇಶ. ಪ್ರದೇಶವಾರು ಭಿನ್ನ ಭಾಷೆಗಳು ಅಸ್ತಿತ್ವದಲ್ಲಿವೆ. 22 ಅಧಿಕೃತ ಭಾಷೆಗಳಿವೆ. ಆದರೆ ಹಿಂದಿ ರಾಷ್ಟ್ರ ಭಾಷೆ ಎಂದು ಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿ ಸಾಕ್ಷಿದಾರರು ಹಿಂದಿಯಲ್ಲಿ ಹೇಳಿಕೆಗಳನ್ನು ನೀಡಬೇಕು,” ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತಾ ಪ್ರಕರಣವೊಂದರ ವಿಚಾರಣೆ ವೇಳೆ ಹೇಳಿದ್ದಾರೆ.
ಉತ್ತರ ಪ್ರದೇಶದ ಫತೇಹಗಡದ ಮೋಟಾರ್ ಅಪಘಾತ ಪರಿಹಾರ ನ್ಯಾಯಮಂಡಳಿಯಲ್ಲಿ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 166ರ ಅಡಿ ಸಿನ್ಹಾ ಅವರು ಪರಿಹಾರ ಅರ್ಜಿ ಸಲ್ಲಿಸಿದ್ದರು. ಸಿನ್ಹಾ ಅವರ ಅಪಘಾತಕ್ಕೀಡಾದ ವಾಹನದ ಮಾಲೀಕರು. ಸಿಲಿಗುರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಪರಿಹಾರ ಅರ್ಜಿಯನ್ನು ನಿರ್ಧರಿಸುವ ಪ್ರಕ್ರಿಯೆಯು ಡಾರ್ಜಿಲಿಂಗ್ನ ಎಂಎಸಿಟಿಯಲ್ಲಿ ನಡೆಯಬೇಕು ಎನ್ನುವುದು ಪ್ರಕರಣದ ವರ್ಗಾವಣೆಗೆ ಮಾಡಿರುವ ಮನವಿಯ ಪ್ರಾಥಮಿಕ ಅಂಶ ಎಂದು ಕೋರ್ಟ್ ಪರಿಗಣಿಸಿತು.
ಇದಕ್ಕೆ ವಿರುದ್ಧವಾಗಿ, ಸೆಕ್ಷನ್ 166ರ ಉಪ ಸೆಕ್ಷನ್ (2), ಹಕ್ಕುದಾರರು ತಾವು ವಾಸಿಸುವ ಪ್ರದೇಶದ ವ್ಯಾಪ್ತಿಯ ಅಥವಾ ಪ್ರತಿವಾದಿ ವಾಸಿಸುವ ಸ್ಥಳೀಯ ಮಿತಿಯಲ್ಲಿನ ಎಂಎಸಿಟಿಯನ್ನು ಸಂಪರ್ಕಿಸುವ ಅವಕಾಶ ಹೊಂದಿದ್ದಾರೆ. ದೂರುದಾರರು ಫರೂಕಾಬಾದ್ ಎಂಎಸಿಟಿಯನ್ನು ಸಂಪರ್ಕಿಸುವ ಆಯ್ಕೆ ಮಾಡಿಕೊಂಡಿದ್ದರು. ಈ ಆಯ್ಕೆಗೆ ಕಾನೂನು ಅವರಿಗೆ ಅವಕಾಶ ನೀಡಿದೆ. ಹೀಗಾಗಿ ಈ ಸಂಬಂಧ ಅರ್ಜಿದಾರರು ಯಾವುದೇ ಅಹವಾಲು ಸಲ್ಲಿಸುವಂತೆ ಇಲ್ಲ ಎಂದು ಪೀಠ ತಿಳಿಸಿದೆ. ವಿಶೇಷವೆಂದರೆ ದತ್ತಾ ಅವರೂ ಪಶ್ಚಿಮ ಬಂಗಾಳದವರಾಗಿದ್ದಾರೆ.
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…