ಇಂದು ( ಡಿಸೆಂಬರ್ 24 ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆಗೆ ಕರೆಕೊಟ್ಟಿದ್ದು, ಈ ಯಾತ್ರೆಯಲ್ಲಿ ಹಲವಾರು ಜನರು ಮಾಲೆ ಧರಿಸಿ ಪಾಲ್ಗೊಂಡಿದ್ದಾರೆ. ಈ ಸಂಕೀರ್ತನಾ ಯಾತ್ರೆ ನಿಮಿಷಾಂಬಾ ದೇವಸ್ಥಾನದ ಬಳಿ ಇರುವ ಆಂಜನೇಯ ದೇವಾಲಯದಿಂದ ಆರಂಭಗೊಳ್ಳಲಿದ್ದು ಪುರಸಭೆ ವೃತ್ತದ ಮೂಲಕ ಶ್ರೀ ರಂಗನಾಥ ಸ್ವಾಮಿ ದೇಗುಲದ ಬಳಿ ಅಂತ್ಯಗೊಳ್ಳಲಿದೆ.
ಇನ್ನು ಈ ಯಾತ್ರೆ ಘೋಷಣೆಯಾದಾಗಲೇ ಕೆಲ ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಯಾತ್ರೆಯುದ್ದಕ್ಕೂ ಯಾವುದೇ ಗಲಭೆಗಳು ನಡೆಯಬಾರದು ಎಂಬ ಕಾರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೂ ಸಹ ಜಾಮಿಯಾ ಮಸೀದಿ ಬಳಿ ಮಾಲಾಧಾರಿಗಳು ತಲುಪಿದಾಗ ಪೊಲೀಸರು ಹಾಗೂ ಮಾಲಾಧಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಜಾಮಿಯಾ ಮಸೀದಿ ಬಳಿ ನಿಲ್ಲಲು ಬಿಡದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಳಿಬಂದಿದ್ದು, ಜಾಮಿಯಾ ಮಸೀದಿ ಮುಂದೆ ಮಾಲಾಧಾರಿಗಳು ಜೈ ಹನುಮಾನ್ ಘೋಷಣೆಯನ್ನು ಕೂಗಿ ಮುಂದೆ ಸಾಗಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…