ಇಂದು ( ಡಿಸೆಂಬರ್ 24 ) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆಗೆ ಕರೆಕೊಟ್ಟಿದ್ದು, ಈ ಯಾತ್ರೆಯಲ್ಲಿ ಹಲವಾರು ಜನರು ಮಾಲೆ ಧರಿಸಿ ಪಾಲ್ಗೊಂಡಿದ್ದಾರೆ. ಈ ಸಂಕೀರ್ತನಾ ಯಾತ್ರೆ ನಿಮಿಷಾಂಬಾ ದೇವಸ್ಥಾನದ ಬಳಿ ಇರುವ ಆಂಜನೇಯ ದೇವಾಲಯದಿಂದ ಆರಂಭಗೊಳ್ಳಲಿದ್ದು ಪುರಸಭೆ ವೃತ್ತದ ಮೂಲಕ ಶ್ರೀ ರಂಗನಾಥ ಸ್ವಾಮಿ ದೇಗುಲದ ಬಳಿ ಅಂತ್ಯಗೊಳ್ಳಲಿದೆ.
ಇನ್ನು ಈ ಯಾತ್ರೆ ಘೋಷಣೆಯಾದಾಗಲೇ ಕೆಲ ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಯಾತ್ರೆಯುದ್ದಕ್ಕೂ ಯಾವುದೇ ಗಲಭೆಗಳು ನಡೆಯಬಾರದು ಎಂಬ ಕಾರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೂ ಸಹ ಜಾಮಿಯಾ ಮಸೀದಿ ಬಳಿ ಮಾಲಾಧಾರಿಗಳು ತಲುಪಿದಾಗ ಪೊಲೀಸರು ಹಾಗೂ ಮಾಲಾಧಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಜಾಮಿಯಾ ಮಸೀದಿ ಬಳಿ ನಿಲ್ಲಲು ಬಿಡದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಳಿಬಂದಿದ್ದು, ಜಾಮಿಯಾ ಮಸೀದಿ ಮುಂದೆ ಮಾಲಾಧಾರಿಗಳು ಜೈ ಹನುಮಾನ್ ಘೋಷಣೆಯನ್ನು ಕೂಗಿ ಮುಂದೆ ಸಾಗಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…