BREAKING NEWS

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago