BREAKING NEWS

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

4 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

5 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

5 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

5 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

5 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

5 hours ago