BREAKING NEWS

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

andolanait

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago