BREAKING NEWS

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago