BREAKING NEWS

ರಾಜ್ಯದಲ್ಲಿ ಹಿಂದೂ ವಿವಾಹ ಪ್ರಮಾಣಪತ್ರ ಆನ್​ ಲೈನ್​ನಲ್ಲಿ ಲಭ್ಯ: ಬಿ.ಆರ್​ ಮಮತಾ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿ.ಆರ್​ ಮಮತಾ ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್​ ಲೈನ್​ನಲ್ಲಿ​​ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15 ರೂ.ಗಳ ಶುಲ್ಕ ನೀಡಿ ಭರ್ತಿ ಮಾಡಬೇಕು. ವಧು ಮತ್ತು ವರರು ಹೆಸರು, ವಯಸ್ಸು, ಪ್ರಸ್ತುತ ವೈವಾಹಿಕ ಸ್ಥಿತಿ, ವಿವಾಹದ ದಿನಾಂಕ, ನಿವಾಸ ವಿಳಾಸ, ವಿವಾಹದ ಸ್ಥಳ, ಸಹಿ ಮತ್ತು ಮೂವರು ಸಾಕ್ಷಿಗಳ ಬಗ್ಗೆ ಮಾಹಿತಿ ಒದಗಿಸಬೇಕು.
ಮದುವೆಯ ಸಮಯದಲ್ಲಿ ತೆಗೆದ ಫೋಟೋ ಮತ್ತು ಆಮಂತ್ರಣ ಪತ್ರಿಕೆಯನ್ನು ಸಹ ಸಲ್ಲಿಸಬೇಕು. ಪ್ರಮಾಣಪತ್ರಕ್ಕೆ ಸಬ್ ರಿಜಿಸ್ಟ್ರಾರ್ ಸಹಿ ಮಾಡುತ್ತಾರೆ. ಇದೆಲ್ಲವೂ ಸುಮಾರು ಅರ್ಧ ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದೆಲ್ಲವೂ ಇನ್ನು ಮುಂದೆ ಆನ್ ಲೈನ್​ನಲ್ಲಿ ಲಭ್ಯವಾಗಲಿದೆ. ಮದುವೆ ಪ್ರಮಾಣಪತ್ರ ಅಗತ್ಯವಿರುವವರು igr.karnataka.gov.in ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ವೆಬ್​ಸೈಟ್​ಗೆ ಭೇಟಿ ನೀಡಿ ವಿವರಗಳನ್ನು ನಮೂದಿಸಬಹುದಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದಂಪತಿ ಮತ್ತು ಸಾಕ್ಷಿಗಳ ಆಧಾರ್​ ಕಾರ್ಡ್​​ ಅನ್ನು ಲಗತ್ತಿಸಬೇಕು. ಆಧಾರ್ ಸಕ್ರಿಯಗೊಳಿಸಿದ ಇ-ಸಹಿಗಳನ್ನು ಸ್ವೀಕರಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಾರ್ಡ್​ನಿಂದ ಸಹಿಯನ್ನು ಪಡೆಯಬೇಕಾಗುತ್ತದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವರಗಳನ್ನು ಸಬ್ ರಿಜಿಸ್ಟ್ರಾರ್ ಪರಿಶೀಲಿಸಬೇಕಾಗಿರುವುದರಿಂದ ಪ್ರಮಾಣಪತ್ರವು ಒಂದು ದಿನದ ನಂತರ ಲಭ್ಯವಾಗುತ್ತದೆ. ಪ್ರಮಾಣಪತ್ರ ಪಡೆಯಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಪೋರ್ಟಲ್​​ಗೆ ಲಾಗಿನ್​ ಆಗಬೇಕು.

andolanait

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

9 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

10 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

14 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

16 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

16 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

17 hours ago