BREAKING NEWS

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು : ಗುಲಾಂ ನಬಿ ಆಜಾದ್

ಶ್ರೀನಗರ : ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಮುಸ್ಲಿಮರ ಮೂಲದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಹಿಂದೂ ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದಿದ್ದಾರೆ.

ಆಗಸ್ಟ್ 14ರಂದು ದೋಡಾ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾಶ್ಮೀರದ ಉದಾಹರಣೆ ಇದೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರು ಇರಲಿಲ್ಲ. ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಲ್ಲಿ ಇಸ್ಲಾಂ ಧರ್ಮ 1,500 ವರ್ಷಗಳ ಹಿಂದೆ ಬಂದಿತ್ತು. ಆದರೆ ಹಿಂದೂ ಧರ್ಮ ಬಹಳ ಹಳೆಯದು ಎಂದರು.

ಇಸ್ಲಾಂ ಧರ್ಮ ಹೊರಗಿನಿಂದ ಬಂದಿರಬೇಕು, 10-20 ಜನರು ಮೊಘಲ್ ಸೈನ್ಯದಿಂದ ಬಂದಿರಬೇಕು. ಉಳಿದವರು ಹಿಂದೂ ಮತ್ತು ಸಿಖ್ ಧರ್ಮದಿಂದ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ಆಜಾದ್ ಅವರು, ನಾವು ಹಿಂದೂಗಳು. ಮುಸ್ಲಿಮರು, ದಲಿತರು, ಕಾಶ್ಮೀರಿಗಳಿಗಾಗಿ ರಾಜ್ಯವನ್ನು ನಿರ್ಮಿಸಿದ್ದೇವೆ. ಇದು ನಮ್ಮ ಭೂಮಿ. ಇಲ್ಲಿ ಯಾರೂ ಹೊರಗಿನಿಂದ ಬಂದಿಲ್ಲ ಎಂದು ಹೇಳಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸಲ್ಮಾನರಾಗಿದ್ದವರು ಯಾರು? ಎಲ್ಲಾ ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಹಾಗಾಗಿ ಎಲ್ಲರೂ ಹಿಂದೂ ಧರ್ಮದಲ್ಲಿ ಹುಟ್ಟಿದ್ದಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

33 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

36 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago