ಶ್ರೀನಗರ : ಕಾಂಗ್ರೆಸ್ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಮುಸ್ಲಿಮರ ಮೂಲದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಹಿಂದೂ ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದಿದ್ದಾರೆ.
ಆಗಸ್ಟ್ 14ರಂದು ದೋಡಾ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾಶ್ಮೀರದ ಉದಾಹರಣೆ ಇದೆ. 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರು ಇರಲಿಲ್ಲ. ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಲ್ಲಿ ಇಸ್ಲಾಂ ಧರ್ಮ 1,500 ವರ್ಷಗಳ ಹಿಂದೆ ಬಂದಿತ್ತು. ಆದರೆ ಹಿಂದೂ ಧರ್ಮ ಬಹಳ ಹಳೆಯದು ಎಂದರು.
ಇಸ್ಲಾಂ ಧರ್ಮ ಹೊರಗಿನಿಂದ ಬಂದಿರಬೇಕು, 10-20 ಜನರು ಮೊಘಲ್ ಸೈನ್ಯದಿಂದ ಬಂದಿರಬೇಕು. ಉಳಿದವರು ಹಿಂದೂ ಮತ್ತು ಸಿಖ್ ಧರ್ಮದಿಂದ ಮತಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ಆಜಾದ್ ಅವರು, ನಾವು ಹಿಂದೂಗಳು. ಮುಸ್ಲಿಮರು, ದಲಿತರು, ಕಾಶ್ಮೀರಿಗಳಿಗಾಗಿ ರಾಜ್ಯವನ್ನು ನಿರ್ಮಿಸಿದ್ದೇವೆ. ಇದು ನಮ್ಮ ಭೂಮಿ. ಇಲ್ಲಿ ಯಾರೂ ಹೊರಗಿನಿಂದ ಬಂದಿಲ್ಲ ಎಂದು ಹೇಳಿದ್ದಾರೆ.
600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸಲ್ಮಾನರಾಗಿದ್ದವರು ಯಾರು? ಎಲ್ಲಾ ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡರು. ಹಾಗಾಗಿ ಎಲ್ಲರೂ ಹಿಂದೂ ಧರ್ಮದಲ್ಲಿ ಹುಟ್ಟಿದ್ದಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…