ಮೈಸೂರು : ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.
13 ಬಾರಿ ರಾಜ್ಯದ ಬಜೆಟ್ ಮಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆ ಆಸ್ತಿ ಹೊಂದಿದ್ದು, ಜೊತೆಗೆ ಸಾಲವನ್ನು ಸಹ ಹೊಂದಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಅಲ್ಲದೆ, ಹಲವು ಕಡೆ ಇವರ ವಿರುದ್ಧ ಪ್ರಕರಣಗಳು ದಾಖಲಾಗಿ ತನಿಖಾ ಹಂತದಲ್ಲಿವೇ ಎಂದು ಮಾಹಿತಿ ನೀಡಿದ್ದಾರೆ.
ಪತಿ-ಪತ್ನಿ ಇಬ್ಬರು ಕೋಟಿ ಒಡೆಯರು : ಸಿದ್ದರಾಮಯ್ಯ ಅವರ ಒಟ್ಟು ಆಸ್ತಿ ಮೌಲ್ಯ 19.29 ಕೋಟಿ, ಅದರಲ್ಲಿ ಸಾಲ 6.89 ಕೋಟಿ. ಒಟ್ಟು ಆಸ್ತಿಯಲ್ಲಿ ಚರಾಸ್ತಿ 9.58 ಕೋಟಿ, ಸ್ಥಿರಾಸ್ತಿ 9.43 ಕೋಟಿ ಇದರ ಜೊತೆಗೆ ಪತ್ನಿ ಪಾರ್ವತಿ ಸಿದ್ದರಾಮಯ್ಯ ಒಟ್ಟು ಆಸ್ತಿ ಮೌಲ್ಯ 30.82 ಕೋಟಿ. ಅದರಲ್ಲಿ ಸಾಲ 16.24 ಕೋಟಿ, ಒಟ್ಟು ಚರಾಸ್ತಿ 11.26 ಕೋಟಿ, ಸ್ಥಿರಾಸ್ತಿ 19.56 ಕೋಟಿಯನ್ನು ಹೊಂದಿದ್ದಾರೆ. ಸಿದ್ದರಾಮಯ್ಯ ಹೆಸರಿನಲ್ಲಿ 28 ಲಕ್ಷ ರೂ. ಮೌಲ್ಯದ ಕಾರು ಹಾಗೂ 350 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಇದೆ. ಹೆಂಡತಿ ಪಾರ್ವತಿ ಸಿದ್ದರಾಮಯ್ಯ ಅವರು 540 ಗ್ರಾಂ ಚಿನ್ನ, 4.5 ಕೆಜಿ ಬೆಳ್ಳಿ ಹೊಂದಿದ್ದಾರೆ. ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಶ್ರೀಮಂತೆಯಾದ ಅವರ ಪತ್ನಿ ಹೆಸರಿನಲ್ಲಿ ಸಾಲವು ಸಹ ಹೆಚ್ಚಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಕರಣಗಳು: ಸಿದ್ದರಾಮಯ್ಯ ವಿರುದ್ಧ ಸಾರ್ವಜನಿಕ ಆಸ್ತಿ ವಿರೂಪ, ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಸೇರಿದಂತೆ ನಾನಾ ಕಾಯ್ದೆಯಡಿ ಮೈಸೂರು, ಕನಕಪುರ, ಮಂಡ್ಯ ಸೇರಿದಂತೆ ಹಲವು ಕಡೆ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ತನಿಖಾ ಹಂತದಲ್ಲಿವೆ. ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಟ್ವಿಟರ್ ನಲ್ಲಿ ಖಾತೆ ಹೊಂದಿದ್ದು ಆದರೆ ವಾಟ್ಸಪ್ ಖಾತೆಯನ್ನು ಹೊಂದಿಲ್ಲ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…