ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಬಿಎಸ್ವೈ ಅವರ ಬಂಧನ ಭೀತಿ ಎದುರಾಗಿದ್ದು, ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದಾರೆ.
ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದು, ಈ ದೂರು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಪ್ರಕಾರ ತನಿಖೆ ಮಾಡುತ್ತಿದ್ದಾರೆ ಎಂದರು.
ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಬಹಳ ಸೂಕ್ಷ್ಮ ವಿಷಯವಾಗಿದೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ದೂರನ್ನು ಟೈಪ್ ಮಾಡಿಕೊಟ್ಟಿದ್ದು, ಕೈಯಿಂದ ಬರೆದು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…