ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ರಾಜ್ಯ ರಾಜಧಾನಿ ಇಂಫಾಲ್ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ.ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.
ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ. ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್ನಿಂದ 51 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆ ಚುರಚಂದ್ಪುರದಿಂದ ಸೆರೆಹಿಡಿದಿದೆ.
ಪ್ರಕರಣ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು, ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
ಜುಲೈ 6 ರಂದು ಮಣಿಪುರದ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಸೆಪ್ಟೆಂಬರ್ 25 ರಂದು ಈಶಾನ್ಯ ರಾಜ್ಯದಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದವು. ಕಾಣೆಯಾಗಿದ್ದ ಫಿಜಾಮ್ ಹೇಮಾನ್ಜಿತ್ ಮತ್ತು ಹಿಜಾಮ್ ಲಿಂಥೋಯಿಂಗಂಬಿ ಅವರ ಪಾರ್ಥಿವ ಶರೀರವನ್ನು ತೋರಿಸುವ ವೀಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಇದರಿಂದ ಮಣಿಪುರದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…