ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ರಾಜ್ಯ ರಾಜಧಾನಿ ಇಂಫಾಲ್ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ.ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.
ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ. ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್ನಿಂದ 51 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆ ಚುರಚಂದ್ಪುರದಿಂದ ಸೆರೆಹಿಡಿದಿದೆ.
ಪ್ರಕರಣ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು, ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
ಜುಲೈ 6 ರಂದು ಮಣಿಪುರದ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಸೆಪ್ಟೆಂಬರ್ 25 ರಂದು ಈಶಾನ್ಯ ರಾಜ್ಯದಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದವು. ಕಾಣೆಯಾಗಿದ್ದ ಫಿಜಾಮ್ ಹೇಮಾನ್ಜಿತ್ ಮತ್ತು ಹಿಜಾಮ್ ಲಿಂಥೋಯಿಂಗಂಬಿ ಅವರ ಪಾರ್ಥಿವ ಶರೀರವನ್ನು ತೋರಿಸುವ ವೀಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಇದರಿಂದ ಮಣಿಪುರದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…