ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ರಾಜ್ಯ ರಾಜಧಾನಿ ಇಂಫಾಲ್ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ.ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.
ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ. ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್ನಿಂದ 51 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆ ಚುರಚಂದ್ಪುರದಿಂದ ಸೆರೆಹಿಡಿದಿದೆ.
ಪ್ರಕರಣ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು, ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
ಜುಲೈ 6 ರಂದು ಮಣಿಪುರದ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಸೆಪ್ಟೆಂಬರ್ 25 ರಂದು ಈಶಾನ್ಯ ರಾಜ್ಯದಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದವು. ಕಾಣೆಯಾಗಿದ್ದ ಫಿಜಾಮ್ ಹೇಮಾನ್ಜಿತ್ ಮತ್ತು ಹಿಜಾಮ್ ಲಿಂಥೋಯಿಂಗಂಬಿ ಅವರ ಪಾರ್ಥಿವ ಶರೀರವನ್ನು ತೋರಿಸುವ ವೀಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಇದರಿಂದ ಮಣಿಪುರದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…