BREAKING NEWS

ಮಣಿಪುರದಲ್ಲಿಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ : ನಾಲ್ವರ ಬಂಧನ

ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ.ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ರವಾನಿಸಲಾಗಿದೆ.

ಆರೋಪಿಗಳನ್ನು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂದು ಗುರುತಿಸಲಾಗಿದೆ. ಲಿಂಗ್ನೀಚಾಂಗ್ ಬೈಟ್ ಕೊಲೆಯಾದ ವಿದ್ಯಾರ್ಥಿನಿಯ ಸ್ನೇಹಿತ. ಶಂಕಿತರಲ್ಲಿ ಒಬ್ಬಾಕೆ ಚುರಾಚಂದ್‌ಪುರ ಮೂಲದ ದಂಗೆಕೋರ ಗುಂಪಿನ ವ್ಯಕ್ತಿಯೊಬ್ಬನ ಪತ್ನಿ ಎಂದು ಹೇಳಲಾಗಿದೆ. ಮಣಿಪುರ ಪೋಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆ ಚುರಚಂದ್‌ಪುರದಿಂದ ಸೆರೆಹಿಡಿದಿದೆ.

ಪ್ರಕರಣ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರು, ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅಪರಾಧಿಗಳನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಚುರಚಂದ್‌ಪುರದಿಂದ ಬಂಧಿಸಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.

ಜುಲೈ 6 ರಂದು ಮಣಿಪುರದ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಸೆಪ್ಟೆಂಬರ್ 25 ರಂದು ಈಶಾನ್ಯ ರಾಜ್ಯದಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದವು. ಕಾಣೆಯಾಗಿದ್ದ ಫಿಜಾಮ್ ಹೇಮಾನ್‌ಜಿತ್ ಮತ್ತು ಹಿಜಾಮ್ ಲಿಂಥೋಯಿಂಗಂಬಿ ಅವರ ಪಾರ್ಥಿವ ಶರೀರವನ್ನು ತೋರಿಸುವ ವೀಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಇದರಿಂದ ಮಣಿಪುರದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.

lokesh

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

3 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

4 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

5 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

5 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

5 hours ago