ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಾರೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಕಾರಣವೇನು? : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾರೇಶ್ನನ್ನು ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ವಿಜಯ್ ಕರೆಸಿಕೊಂಡಿದ್ದ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಮಾರೇಶ್ನ ಕತ್ತಿಗೆ ಚಾಕುವಿನಿಂದ ವಿಜಯ್ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ಹಲ್ಲೆಯಿಂದ ಅಸ್ವಸ್ಥನಾಗಿ ಕೆಳಗೆ ಬಿದ್ದ ಮಾರೇಶ್ನ ಕತ್ತಿನಿಂದ ವಿಜಯ್ ರಕ್ತ ಕುಡಿದಿದ್ದಾನೆ. ಇದನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…