BREAKING NEWS

ಹೊಸಕೋಟೆ| ಹಿಂಸಾಚಾರಕ್ಕೆ ತಿರುಗಿದ ಸಂಭ್ರಮಾಚರಣೆ: ಬಿಜೆಪಿ ಕಾರ್ಯಕರ್ತನ ಹತ್ಯೆ

ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಎಂ.ಟಿ.ಬಿ.ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ.

ಈ ವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.

ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

8 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

11 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

11 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

11 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

12 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

14 hours ago