BREAKING NEWS

ಅಪಾಯದ ಹಂತ ತಲುಪಿದ ಬಿಸಿಗಾಳಿ

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.

ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.

ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್‌ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.

lokesh

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago