BREAKING NEWS

ಅಪಾಯದ ಹಂತ ತಲುಪಿದ ಬಿಸಿಗಾಳಿ

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.

ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.

ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್‌ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.

lokesh

Recent Posts

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

18 mins ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

58 mins ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

2 hours ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

4 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

4 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

4 hours ago